ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm