ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm