ಬ್ರೇಕಿಂಗ್ ನ್ಯೂಸ್
17-07-24 11:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರ ಮಧ್ಯೆ ಜುಲೈ 18 ಮತ್ತು 19ರಂದು ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಜುಲೈ 18ರಂದು ಶಾಲೆ ಮತ್ತು ಕಾಲೇಜಿಗೆ ರಜೆ ನೀಡಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಮಾಡಿದ್ದು, ಮಂಗಳೂರು, ಉಳ್ಳಾಲ, ಮೂಲ್ಕಿ- ಮೂಡುಬಿದ್ರೆ ತಾಲೂಕಿಗೆ ರಜೆ ನೀಡಿಲ್ಲ. ಗ್ರಾಮಾಂತರ ಪ್ರದೇಶದ ತಾಲೂಕುಗಳಿಗೆ ರಜೆ ನೀಡಿದ್ದಾಗಿ ತಿಳಿಸಿದ್ದಾರೆ. ಇದಲ್ಲದೆ, ಶಾಲೆಗೆ ಬರದ ಮಕ್ಕಳನ್ನು ಕಡ್ಡಾಯ ಹಾಜರಾತಿ ಮಾಡುವಂತಿಲ್ಲ. ಮಕ್ಕಳು, ಹೆತ್ತವರು ನದಿ ದಡಗಳಲ್ಲಿ ಜಾಗ್ರತೆ ಇರಬೇಕು. ಮೀನುಗಾರರು ನದಿ, ಸಮುದ್ರಕ್ಕೆ ತೆರಳಬಾರದು ಎಂದೂ ಮುನ್ನೆಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಜುಲೈ 18ರಂದು ಜಿಲ್ಲೆಯಲ್ಲಿ ರಜೆ ನೀಡಲಾಗಿದೆ ಎಂದು ಫೇಕ್ ಲೆಟರ್ ವೈರಲ್ ಆಗಿತ್ತು. ಇದರ ಬಗ್ಗೆ ಸಿಟ್ಟಾದ ಜಿಲ್ಲಾಧಿಕಾರಿ, ಅಂತಹ ಫೇಕ್ ಪತ್ರವನ್ನು ಸೃಷ್ಟಿಸಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು. ಅಲ್ಲದೆ, ಇಂತಹ ಫೇಕ್ ಲೆಟರನ್ನು ವೈರಲ್ ಮಾಡಿದರೂ ಕ್ರಮ ಜರುಗಿಸುವುದಾಗಿ ಹೇಳಿದ್ದರು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ರಜೆ ಇತ್ತು. ಸೋಮವಾರ, ಮಂಗಳವಾರ ಮಳೆಯಿಂದ ರಜೆ ಇದ್ದರೆ, ಬುಧವಾರ ಮೊಹರಂ ಪ್ರಯುಕ್ತ ರಜೆ ಇತ್ತು. ಜುಲೈ 18ರಂದು ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಿಲ್ಲ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ರಜೆ ನೀಡಲಾಗಿದೆ.
No holiday for schools in Mangalore and moodbidri on July 18, only holiday for rural areas says DC. Dakshina Kannada district is experiencing continuous rains, in the midst of which a red alert has been issued by the meteorological department on July 18 and 19. Schools and colleges have been closed on July 18 in Puttur, Bantwala, Belthangadi, Sulya and Kadaba taluks.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm