ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm