ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm