ಬ್ರೇಕಿಂಗ್ ನ್ಯೂಸ್
19-07-24 12:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಇತ್ತೀಚೆಗೆ ರಿಯಲ್ ಎಸ್ಟೇಟ್ ಬಿಲ್ಡರುಗಳ ಸಿಟ್ಟಿನ ಕಾರಣಕ್ಕೆ ವರ್ಗಾವಣೆಯಾದರೂ, ಅದಕ್ಕೆ ಟ್ರಿಬ್ಯುನಲ್ ಮೂಲಕ ತಡೆ ತಂದುಕೊಂಡು ಮಂಗಳೂರಿನಲ್ಲೇ ಝಂಡಾವೂರಿದ್ದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಮಂಗಳೂರು ಪಾಲಿಕೆಯ ಕಚೇರಿ ಮತ್ತು ಮಣ್ಣಗುಡ್ಡದ ಆಯುಕ್ತರ ಬಂಗಲೆಗೆ ಏಕಕಾಲದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಆನಂದ ಸಿ.ಎಲ್ ಮೂಲತಃ ಮಂಡ್ಯದವರಾಗಿದ್ದು ಸೈನಿಕನಾಗಿ ನಿವೃತ್ತಿ ಪಡೆದು ಕೆಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೈಸೂರಿನಲ್ಲಿ ವಿಭಾಗಾಧಿಕಾರಿ ಮತ್ತು ಬೆಂಗಳೂರು ಬಿಡಿಎಯಲ್ಲಿ ಅಧಿಕಾರಿಯಾಗಿದ್ದ ವೇಳೆ ಅಕ್ರಮ ಆಸ್ತಿ ಮಾಡಿಕೊಂಡ ಬಗ್ಗೆ ಆನಂದ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಹೋಗಿತ್ತು.
ಇದೀಗ ರಾಜ್ಯಾದ್ಯಂತ 54 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪದಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಸೇರಿದಂತೆ ಆನಂದ ಸಿಎಲ್ ಅವರು ಅಕ್ರಮ ಆಸ್ತಿ ಮಾಡಿಟ್ಟ ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ದಾಳಿ ಮಾಡಿದ್ದಾರೆ. ಮಂಗಳೂರಿನಲ್ಲಿ ಡಿವೈಎಸ್ಪಿ ಬಸವರಾಜ ಮಗ್ದುಂ ನೇತೃತ್ವದಲ್ಲಿ ದಾಳಿಯಾಗಿದೆ. 


ಇತ್ತೀಚೆಗೆ ಮಂಗಳೂರಿನ ಬಲ್ಮಠದಲ್ಲಿ ಪ್ರಭಾವಿ ಬಿಲ್ಡರ್ ಒಬ್ಬರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪಾಲಿಕೆ ಕಮಿಷನರ್ ಆನಂದ ಸಿ.ಎಲ್ ಅವರು ಬಿಲ್ಡರ್ ಗೆ ನೋಟೀಸ್ ನೀಡಿದ್ದಲ್ಲದೆ, ಮುಂದಿನ ಆದೇಶದ ವರೆಗೆ ಕಾಮಗಾರಿ ನಡೆಸದಂತೆ ಸೂಚಿಸಿದ್ದರು. ಇದಲ್ಲದೆ, ಮಂಗಳೂರಿನ ಒಬ್ಬ ಪ್ರಭಾವಿ ಇಂಜಿನಿಯರ್, ಇತರ ಬಿಲ್ಡರುಗಳ ಮೇಲೆಯೂ ಕಮಿಷನರ್ ನೋಟಿಸ್ ಮಾಡಿದ್ದರು. ಇದರ ಬೆನ್ನಲ್ಲೆ ಕಮಿಷನರ್ ಹುದ್ದೆಯಿಂದ ವರ್ಗಾವಣೆ ಆಗಿದ್ದರು. ಆದರೆ, ಆನಂದ ಸಿಎಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ತನ್ನ ವರ್ಗಾವಣೆಯನ್ನು ತಡೆ ಹಾಕಿದ್ದರು.
Mangaluru City Corporation Commissioner C L Ananda house and office raided by Lokayukta. The Karnataka Lokayukta on Friday morning launched massive search operations in 55 places in six districts across the state. This is the second large-scale raid targetting erring government officials in over a week
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm