ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm