ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm