ಬ್ರೇಕಿಂಗ್ ನ್ಯೂಸ್
19-07-24 08:56 pm Mangalore Correspondent ಕರಾವಳಿ
ಬೆಂಗಳೂರು, ಜುಲೈ.19: ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಹೆದ್ದಾರಿಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಜಿಲ್ಲಾಡಳಿತಗಳ ನಡುವೆ ಸಮನ್ವಯತೆ ಕೊರತೆ ಇರುವುದು ಕಂಡುಬರುತ್ತಿದೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಕಳೆದ ರಾತ್ರಿ ಮಡಿಕೇರಿ ಘಾಟ್ ಬಂದ್ ಮಾಡಿದ್ದರಿಂದ ನೂರಾರು ಜನರು ರಸ್ತೆ ಮಧ್ಯೆ ಅತಂತ್ರರಾಗಿದ್ದರು. ಇದು ಉಭಯ ಜಿಲ್ಲೆಗಳ ಜಿಲ್ಲಾಡಳಿತದ ಪೂರ್ವ ಸಿದ್ಧತೆಯ ಕೊರತೆಯಾಗಿದೆ. ಮಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವ ಸಿದ್ಧತೆಯೊಂದಿಗೆ ಘಾಟ್ ಬಂದ್ ಬಗ್ಗೆ ಚಿಂತಿಸಬೇಕು. ಒಂದೊಂದು ಜಿಲ್ಲೆಯವರು ತೀರ್ಮಾನ ತೆಗೆದುಕೊಂಡರೆ ಜನರಿಗೆ ಸಮಸ್ಯೆಯಾಗುತ್ತದೆ.
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ರಾತ್ರಿ 8 ರಿಂದ ಬೆಳಗ್ಗೆ 6ರ ತನಕ ರಸ್ತೆ ನಿರ್ಬಂಧ ಮಾಡಬೇಕು. ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೆಲ್ವಕುಮಾರ್ ಅವರಿಗೆ ಯು.ಟಿ.ಖಾದರ್ ಸೂಚಿಸಿದ್ದಾರೆ.
ದಿನನಿತ್ಯ ಸಹಸ್ರಾರು ಮಂದಿ ಮಂಗಳೂರು- ಬೆಂಗಳೂರು ಮಧ್ಯೆ ಪ್ರಯಾಣಿಸುತ್ತಾರೆ. ಪ್ರಯಾಣಿಕರು ಬಸ್, ಕಾರುಗಳನ್ನು ಆಶ್ರಯಿಸುತ್ತಾರೆ. ನಿತ್ಯ ಬಳಕೆಯ ವಸ್ತುಗಳ ಟ್ರಕ್ ಗಳೂ ಸಂಚರಿಸುತ್ತವೆ. ಆದರೆ ಈ ಪ್ರಮುಖ ಮೂರೂ ಘಾಟ್ ರಸ್ತೆಗಳನ್ನು ಬಂದ್ ಮಾಡಿದರೆ ಜನರು ಪರದಾಟ ನಡೆಸಬೇಕಾಗುತ್ತದೆ. ವಿಮಾನ ಸಂಚಾರ ಜನಸಾಮಾನ್ಯರ ಕೈಗೆಟಕದು. ರೈಲು ಸಂಚಾರ ತುರ್ತು ಸಂದರ್ಭಗಳಿಗೆ ಅನುಗುಣವಾಗಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಸಂಚಾರ ಅನಿವಾರ್ಯವಾಗಿರುತ್ತದೆ.
ಮಡಿಕೇರಿ ಘಾಟ್ ನಲ್ಲಿ ನಿನ್ನೆ ಆದಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ಆಸುಪಾಸಿನ ಜಿಲ್ಲೆಗಳ ನಾಲ್ಕೂ ಜಿಲ್ಲಾಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
Mangalore Bangalore shiradhi ghat closed, speaker U T Khader slams administration over planning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm