ಬ್ರೇಕಿಂಗ್ ನ್ಯೂಸ್
22-07-24 05:30 pm Mangalore Correspondent ಕರಾವಳಿ
ಮಂಗಳೂರು, ಜುಲೈ.22: ಸರಕಾರಿ ಶಾಲೆಗಳ ಆವರಣದಲ್ಲಿ ಅಥವಾ ಶಾಲಾ ಮೈದಾನದಲ್ಲಿ ಗಣೇಶೋತ್ಸವ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಸುತ್ತೋಲೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ತುಷ್ಟೀಕರಣ ನೀತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧ ಎದುರಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶನ ವಿಗ್ರಹ ಮುಂದಿಟ್ಟು ಒಂದು ಗಂಟೆ ಕಾಲ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಕಾಂಗ್ರೆಸಿನಲ್ಲಿರುವ ಹಿಂದುಗಳು ಕೂಡ ಶಾಲೆಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಸುತ್ತಿದ್ದರು. ಶಾಲಾ ಮೈದಾನದಲ್ಲಿ ಎಲ್ಲ ಮಕ್ಕಳೂ ಜೊತೆಯಾಗಿ ಉತ್ಸವದಲ್ಲಿ ಕಳೆಯುತ್ತಿದ್ದರು. ಆದರೆ, ಕಾಂಗ್ರೆಸಿನ ಹಿಂದುಗಳು ಸರಕಾರದ ನೀತಿಯನ್ನು ಖಂಡಿಸಲಾಗದ ಸ್ಥಿತಿಯಲ್ಲಿದ್ದಾರೆ. ಹಿಂದುಗಳು ಜಾಗೃತರಾಗಬಾರದು, ಜೊತೆಗೂಡಬಾರದು ಎನ್ನುವ ಹುನ್ನಾರದಿಂದ ಈ ರೀತಿಯ ಕೆಲಸ ಮಾಡಿದ್ದಾರೆ.


ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಗ್ಗೂಡಿಸುವುದಕ್ಕಾಗಿ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಣೆಗೆ ತಂದಿದ್ದರು. ಪ್ರತಿ ವರ್ಷ ಕರಾವಳಿ ಸೇರಿದಂತೆ ನಾಡಿನೆಲ್ಲೆಡೆ ಗಣೇಶೋತ್ಸವ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹಳಷ್ಟು ಕಡೆ ಶಾಲಾ ಮೈದಾನದಲ್ಲಿ ಹಬ್ಬ ನಡೆಸಲಾಗುತ್ತದೆ. ಆದರೆ, ಈ ಬಾರಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಪತ್ರ ಬರೆದು ಶಿಕ್ಷಣೇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚಿಸಿದ್ದಾರೆ. ಆಮೂಲಕ ಹಿಂದುಗಳ ಹಬ್ಬ ಗಣೇಶೋತ್ಸವ ಇನ್ನಿತರ ಉತ್ಸವಗಳಿಗೆ ಆಸ್ಪದ ಸಿಗದಂತೆ ಮಾಡಿದ್ದಾರೆ. ಇದರ ಹಿಂದೆ ಸರ್ಕಾರದ ಹಿಂದು ವಿರೋಧಿ ನೀತಿ ಇದೆಯೆಂದು ಸತೀಶ್ ಕುಂಪಲ ಆರೋಪಿಸಿದರು.
ಪ್ರತಿಭಟನೆಯಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮೇಯರ್ ಸುಧೀರ್ ಶೆಟ್ಟಿ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಮಾತನಾಡಿದರು. ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರವಿಶಂಕರ ಮಿಜಾರ್, ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಪ್ರಮುಖರು ಮತ್ತಿತರರಿದ್ದರು.
Denial of Ganeshotsava in school grounds by Congress government, BJP protest by Satish Kumpala in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm