ಬ್ರೇಕಿಂಗ್ ನ್ಯೂಸ್
23-07-24 01:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.23: ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ತಡೆದು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಲೋಕಾಯುಕ್ತ ಬೆಂಗಳೂರು ವಿಭಾಗದ ಅಧಿಕಾರಿಗಳು ಮಂಗಳೂರಿನ ಪಾಲಿಕೆ ಕಮಿಷನರ್ ಮನೆ, ಕಚೇರಿಗೆ ದಾಳಿ ನಡೆಸಿದ್ದರು. ಬೆಂಗಳೂರು, ಮೈಸೂರಿನಲ್ಲಿ ಮನೆ, ಜಮೀನು ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಯಕರ್ತರು ಪಾಲಿಕೆ ಮುಂದೆ ಪ್ರತಿಭಟಿಸಿ, ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಸ್ಸಿನಲ್ಲಿಯೂ ಪ್ರತಿಭಟನೆ ಮುಂದುವರಿಸಿ ಘೋಷಣೆ ಕೂಗಿದ್ದರು.









ಡಿವೈಎಫ್ಐ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವೇ ಭ್ರಷ್ಟಾಚಾರ ನಡೆಸುತ್ತಿದ್ದು ಇದಕ್ಕೆ ಪಾಲಿಕೆ ಕಮಿಷನರ್ ಸಾಥ್ ನೀಡುತ್ತಿದ್ದಾರೆ. ಇಂಥ ಆಯುಕ್ತರನ್ನು ಕರ್ತವ್ಯದಲ್ಲಿ ಉಳಿಸಿಕೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
Dyfi members gherao Mangalore city corporation over suspension of commissioner C L Anand after the lokayukta raided his office and house in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm