ಬ್ರೇಕಿಂಗ್ ನ್ಯೂಸ್
24-07-24 12:28 pm Mangaluru Correspondent ಕರಾವಳಿ
ಮಂಜೇಶ್ವರ, ಜು.24: ಯುವಕನೋರ್ವನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿಯ ಮರಿಯಾಶ್ರಮ ಚರ್ಚ್ ಬಳಿ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.
ತಲಪಾಡಿ ಮಾರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಬ್ರಾಯನ್ ಪಿಂಟೋ (20) ನಿನ್ನೆ ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಪಾಡಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕರಾಗಿರುವ ಬೆನೆಟ್ ಪಿಂಟೋರ ಪುತ್ರನಾಗಿರುವ ಬ್ರಾಯನ್ ಪಿಂಟೋ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಮೊನ್ನೆ ರಾತ್ರಿ ಮನೆಯಲ್ಲಿದ್ದ ಬ್ರಾಯನ್ ನಿನ್ನೆ ಬೆಳಗ್ಗೆ ಮನೆಯಲ್ಲಿ ಇರಲಿಲ್ಲ. ಮನೆಯ ಪಕ್ಕದಲ್ಲೇ ಬೆನೆಟ್ ಅವರಿಗೆ ಸೇರಿರುವ ಮತ್ತೊಂದು ಮನೆಯಿದ್ದು ಆ ಮನೆಯ ಪಕ್ಕಾಸಿಗೆ ಬ್ರಾಯನ್ ಪಿಂಟೊ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಸರದಲ್ಲಿ ವಾಕಿಂಗ್ ಹೋಗುವವರು ಘಟನೆಯನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಇಂದು ಸಂಜೆ ಮನೆಗೆ ತರಲಾಗುವುದು. ಬಳಿಕ ತಲಪಾಡಿ ಮರಿಯಾಶ್ರಮ ಚರ್ಚ್ ನಲ್ಲಿ ಧಪನ ಕಾರ್ಯಕ್ರಮ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತಪಟ್ಟ ಬ್ರಾಯನ್ ಪಿಂಟೋ ತಂದೆ, ತಾಯಿ ಈನೆಟ್ ಪಿಂಟೋ, ಸಹೋದರಿ ಬ್ರಿಯೊನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
A twenty-year-old boy kills himself in Talpady, Mangalore. Bryan Pinto has been identified as the dead. He's been having suicide thoughts due to certain issues in his relationship. Manjeshwar police has the case lodged.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm