ಬ್ರೇಕಿಂಗ್ ನ್ಯೂಸ್
24-07-24 02:24 pm Mangalore Correspondent ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ.
ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು.
ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದ ವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದ್ದಾರೆ.
#Mangalore MP #BrijeshChowta insists on starting a passenger train between Mangalore and Subrahmanya in Parliament, to #Railway Minister #AshwiniVaishnaw. Also, the railway minister stated that Brijesh Chowta can come to his office and discuss the proposal. @CaptBrijesh pic.twitter.com/gZTsnR8K09
— Headline Karnataka (@hknewsonline) July 24, 2024
Mangalore MP Brijesh Chowta insists on starting a passenger train between Mangalore and Subrahmanya in Parliament, Railway Minister Ashwini Vaishnawsaid. Also, the railway minister stated that Brijesh Chowta can come to his office and discuss the proposal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm