ಬ್ರೇಕಿಂಗ್ ನ್ಯೂಸ್
24-07-24 09:01 pm HK News Desk ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಣ್ಣು ಕುಕ್ಕುವ ರೀತಿಯ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ಪೊಲೀಸರು ಜೂನ್ 15 ರಿಂದ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ 1170 ಪ್ರಕರಣಗಳನ್ನು ದಾಖಲಿಸಿ 5,86,500 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ವಿಶೇಷ ಸೂಚನೆ
ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ-1989 ರಲ್ಲಿ ಸೂಚಿಸಿರುವಂತೆ ವಿವಿಧ ಮಾದರಿಯ ವಾಹನಗಳಿಗೆ ಸದರಿ ವಾಹನ ಕಂಪೆನಿಯವರು ನಿಗದಿ ಪಡಿಸಿದ ಹೆಡ್ ಲೈಟ್ ಗಳನ್ನು ಮಾತ್ರ ಅಳವಡಿಸಬೇಕಾಗಿರುತ್ತದೆ.
ಹೆಚ್ಚುವರಿಯಾಗಿ ಅಲಂಕಾರಿಕ ದೀಪಗಳನ್ನು ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸುವಂತಿಲ್ಲ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಬೀದಿದೀಪಗಳು ಇರುವೆಡೆ ಯಾವುದೇ ಕಾರಣಕ್ಕೂ ಹೈಬೀಮ್ ಬೆಳಕಿನೊಂದಿಗೆ ವಾಹನಗಳನ್ನು ಚಲಾಯಿಸುವಂತಿಲ್ಲ.
ಮೋಟಾರು ಸೈಕಲ್ ಹಾಗೂ ಆಟೋರಿಕ್ಷಾಗಳು 1 ಅಥವಾ 2 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು. ನಾಲ್ಕು ಚಕ್ರ ಮತ್ತು ಹೆಚ್ಚಿನ ಚಕ್ರದ ವಾಹನಗಳು 2 ಅಥವಾ 4 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು.
ವಾಹನಗಳ ಹೆಡ್ ಲೈಟ್ ಗಳಿಂದ ಹೊರಹೊಮ್ಮವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿ ಸದರಿ ಹೆಡ್ ಲೈಟ್ ನಿಂದ 8 ಮೀಟರ್ ದೂರದಲ್ಲಿನ ವಾಹನದಲ್ಲಿ ಕುಳಿತಿರುವ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ. ಹಾಗೆಯೇ ಸದರಿ ವಾಹನದ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ನಿಂದ ಬಲಕ್ಕೆ 0.5 ಮೀ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
High beam light, Mangalore police collect fine of rs 5.87 lakhs. Police have fined almost 1170 vehicles so far.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm