ಬ್ರೇಕಿಂಗ್ ನ್ಯೂಸ್
25-07-24 05:04 pm Udupi Correspondent ಕರಾವಳಿ
ಉಡುಪಿ, ಜುಲೈ.25: ವಿಧಾನಸಭೆ ಅಧಿವೇಶನದಲ್ಲಿ ತನ್ನ ಮೇಲೆ ಕಾರ್ಕಳ ಸುನಿಲ್ ಕುಮಾರ್ ಮುಡಾ ಸೈಟ್ ಬಗ್ಗೆ ಆರೋಪ ಮಾಡಿದಾಗ, ಸಿಎಂ ಸಿದ್ದರಾಮಯ್ಯ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರದ ಬಗ್ಗೆ ಪ್ರಶ್ನೆ ಎತ್ತಿದ್ದರು. ಮುಖ್ಯಮಂತ್ರಿ ಕಾಲ ಬುಡಕ್ಕೆ ಬಂದಾಗ ಥೀಮ್ ಪಾರ್ಕ್ ಜ್ಞಾನೋದಯ ಆಗಿದೆ, ಕಾಂಗ್ರೆಸಿಗರು ಪ್ರತಿಭಟನೆ ಮಾಡಿದರೂ ಎಚ್ಚರ ಆಗಿರಲಿಲ್ಲ ಎಂಬ ಟೀಕೆಯೂ ಬಂದಿತ್ತು. ಇದರ ಬೆನ್ನಲ್ಲೇ ನಕಲಿ ಪರುಶುರಾಮ ಮೂರ್ತಿ ವಿವಾದಕ್ಕೆ ಸಂಬಂಧಿಸಿ ಅಧಿಕಾರಿಯೊಬ್ಬರ ತಲೆದಂಡ ಮಾಡಲಾಗಿದೆ.
ಪರುಶುರಾಮ ಥೀಮ್ ಪಾರ್ಕ್ ನಿರ್ಮಾಣದ ಉಸ್ತುವಾರಿ ಹೊತ್ತಿದ್ದ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ರಾಜ್ಯ ಸರಕಾರ ಪ್ರಕರಣದ ತನಿಖೆಯನ್ನು ಒಂದ್ಕಡೆ ಸಿಓಡಿಗೆ ಒಪ್ಪಿಸಿದ್ದರೆ, ಇನ್ನೊಂದೆಡೆ ನ್ಯಾ.ನಾಗಮೋಹನ್ ದಾಸ್ ವಿಚಾರಣಾ ಆಯೋಗವನ್ನು ನೇಮಿಸಿತ್ತು.

ನಕಲಿ ಮೂರ್ತಿ ನಿರ್ಮಿಸಿದ್ದಾರೆ, ಧಾರ್ಮಿಕ ಭಾವನೆಗೆ ಅಪಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದರೂ, ರಾಜ್ಯ ಸರ್ಕಾರ ಮೌನ ವಹಿಸಿತ್ತು. ತರಾತುರಿಯಲ್ಲಿ ಥೀಮ್ ಪಾರ್ಕ್ ಉದ್ಘಾಟನೆ ನೆರವೇರಿಸಿದ್ದೂ ಟೀಕೆಗೆ ಗುರಿಯಾಗಿತ್ತು. ಆನಂತರ, ಮೂರ್ತಿಯನ್ನು ಅಲ್ಲಿಂದ ತೆರವುಗೊಳಿಸಿ ವರ್ಷ ಕಳೆಯುತ್ತಾ ಬಂತು. ಒಟ್ಟು ತನಿಖೆಯೇ ಹಳ್ಳ ಹಿಡಿದು ಹೋಗುತ್ತಿದ್ದರೂ ಮೌನ ವಹಿಸಿದ ಸರ್ಕಾರ ಇದೀಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿ ಆ ಜಾಗಕ್ಕೆ ಬೇರೊಬ್ಬರನ್ನು ನೇಮಕ ಮಾಡಿದೆ.
ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ನಡೆಸಲು 11.05 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿತ್ತು. ಆದರೆ ಅನುದಾನ ಬಿಡುಗಡೆಯಾಗಿದ್ದು 6.72 ಕೋಟಿಯಾಗಿತ್ತು. ಕಾಮಗಾರಿ ಪೂರ್ಣಗೊಳಿಸದೇ ಸಂಬಂಧಪಟ್ಟ ಇಲಾಖೆಗೂ ಹಸ್ತಾಂತರ ಮಾಡದೇ ಉದ್ಘಾಟನೆ ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ, ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಅಲ್ಲದೆ, ಹೈಕೋರ್ಟಿಗೂ ದೂರು ಹೋಗಿತ್ತು. ಸದ್ರಿ ಪ್ರಕರಣದ ತನಿಖೆಗೆ ಅಡ್ಡಿಯಾಗುವ ನೆಪದಲ್ಲಿ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದು ಆ ಹುದ್ದೆಗೆ ಸಹಾಯಕ ಯೋಜನಾ ನಿರ್ದೇಶಕರಾಗಿದ್ದ ದಿವಾಕರ ಪಿ. ಅವರನ್ನು ನೇಮಿಸಲಾಗಿದೆ.
Karkala Parashurama Theme Park scam under MLA Sunil Kumar has now got a big update where the project director has been suspended over poor work by the government. Chief minister (CM) Siddaramaiah had ordered chief secretary of the tourism department to hold investigation into the alleged scam in the construction of Parashuram Theme Park at Karkala.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm