ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am