ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am