ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm