ಬ್ರೇಕಿಂಗ್ ನ್ಯೂಸ್
26-07-24 09:06 pm Mangalore Correspondent ಕರಾವಳಿ
ಉಳ್ಳಾಲ, ಜು.26: ಉಳ್ಳಾಲ ತಾಲೂಕಿನ ಸೋಮೇಶ್ವರ ನ್ಯೂಉಚ್ಚಿಲದಲ್ಲಿ ಕಡಲು ಶುಕ್ರವಾರ ಮತ್ತಷ್ಟು ಪ್ರಕ್ಷುಬ್ದಗೊಂಡಿದೆ. ಕಡಲ್ಕೊರೆತ ತಡೆಯಲು ತಾತ್ಕಾಲಿಕ ರಕ್ಷಣಾ ಕಾಮಗಾರಿಯನ್ನು ಇನ್ನೂ ಆರಂಭಿಸಿಲ್ಲ. ಜಿಲ್ಲಾಧಿಕಾರಿ ಮತ್ತು ಬಂದರು ಅಧಿಕಾರಿಗಳಿಗೆ ಕರೆ ಮಾಡಿದರೂ ಸಮರ್ಪಕ ಸ್ಪಂದನೆ ಸಿಕ್ಕಿಲ್ಲವೆಂದು ಸೋಮೇಶ್ವರ ಪುರಸಭಾ ಸದಸ್ಯ ರವಿಶಂಕರ್ ಸೋಮೇಶ್ವರ ದೂರಿದ್ದಾರೆ.
ಸೋಮೇಶ್ವರ ನ್ಯೂಉಚ್ಚಿಲದ ವಾಸ್ಕೊ ರೆಸಾರ್ಟ್ ಎದುರಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ತೀರದಲ್ಲಿರುವ ಯೋಗೀಶ್ ಎಂಬವರ ಮನೆ ಈಗಲೋ ಆಗಲೋ ಎಂದು ಸಮುದ್ರಕ್ಕೆ ಆಹುತಿಯಾಗುವ ಭೀತಿಯಲ್ಲಿದೆ. ಸೋಮೇಶ್ವರ - ಉಚ್ಚಿಲ ಸಂಪರ್ಕದ ಬೀಚ್ ರಸ್ತೆಯನ್ನೂ ಪ್ರಚಂಡ ಅಲೆಗಳು ನುಂಗಲು ಮುಂದಡಿ ಇಡುತ್ತಿವೆ. ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಅವರು ಶುಕ್ರವಾರದಂದೇ ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿಯನ್ನು ಬಂದರು ಇಲಾಖಾಧಿಕಾರಿಗಳು ಆರಂಭಿಸುವುದಾಗಿ ಹೇಳಿದ್ದರು.


ಶುಕ್ರವಾರ ಸಮುದ್ರ ಕೊರೆತ ತಡೆಗೆ ಕಲ್ಲುಗಳನ್ನ ಹಾಕುವ ತಾತ್ಕಾಲಿಕ ಕಾಮಗಾರಿ ಆರಂಭಿಸುವ ನಿರೀಕ್ಷೆ ಸ್ಥಳೀಯರಲ್ಲಿತ್ತು. ಆದರೆ ಸಂಜೆಯ ವರೆಗೂ ರಕ್ಷಣಾ ಕಾಮಗಾರಿಗಳನ್ನ ಆರಂಭಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗೆಯೆ ಅಧಿಕಾರಿಗಳು ಅಸಡ್ಡೆ ವಹಿಸಿದರೆ ಕೆಲವೇ ದಿನಗಳಲ್ಲಿ ಉಚ್ಚಿಲ- ಸೋಮೇಶ್ವರ ಸಂಪರ್ಕ ರಸ್ತೆಯೂ ಸಮದ್ರ ಪಾಲಾಗುವುದು ನಿಶ್ಚಿತವಾಗಿದೆ.
ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ಕರೆ ಮಾಡಿದ್ದೆ. ಅವರ ಆಪ್ತ ಸಹಾಯಕರು ಕರೆ ಸ್ವೀಕರಿಸಿ ಮಾತನಾಡಿದ್ದು ಕಡಲ್ಕೊರೆತದ ತೀವ್ರತೆಯ ಬಗ್ಗೆ ಹೇಳಿದ್ದೆ. ಶುಕ್ರವಾರ ಮತ್ತೆ ಜಿಲ್ಲಾಧಿಕಾರಿಗಳಿಗೆ ಫೋನ್ ಕರೆ ಮಾಡಿದ್ದು ಕರೆಯನ್ನು ಯಾರೂ ಸ್ವೀಕರಿಸಿಲ್ಲ. ಒಂದೆರಡು ಬಂದರು ಅಧಿಕಾರಿಗಳಿಗೂ ಫೋನ್ ಕರೆ ಮಾಡಿದ್ದು ಅವರಿಂದಲೂ ಸಮಸ್ಯೆಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನ ರಕ್ಷಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ರೀತಿ ಅಧಿಕಾರಿಗಳು ಅಸಡ್ಡೆ ತೋರಿಸಿದರೆ ಶೀಘ್ರವೇ ಮನೆ ಮತ್ತು ರಸ್ತೆ ಸಮುದ್ರ ಪಾಲಾಗಲಿದೆ ಎಂದು ಸೋಮೇಶ್ವರ ಪುರಸಭೆ ಸದಸ್ಯರಾದ ರವಿಶಂಕರ್ ಸೋಮೇಶ್ವರ ಹೇಳಿದ್ದಾರೆ.
Mangalore Someswara beach rough sea at Uchila, residents in great danger and fear. Local authorities, adminstration and port authorise show no concern even after residents calling them for help.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm