ಬ್ರೇಕಿಂಗ್ ನ್ಯೂಸ್
26-07-24 09:06 pm Mangalore Correspondent ಕರಾವಳಿ
ಉಳ್ಳಾಲ, ಜು.26: ಉಳ್ಳಾಲ ತಾಲೂಕಿನ ಸೋಮೇಶ್ವರ ನ್ಯೂಉಚ್ಚಿಲದಲ್ಲಿ ಕಡಲು ಶುಕ್ರವಾರ ಮತ್ತಷ್ಟು ಪ್ರಕ್ಷುಬ್ದಗೊಂಡಿದೆ. ಕಡಲ್ಕೊರೆತ ತಡೆಯಲು ತಾತ್ಕಾಲಿಕ ರಕ್ಷಣಾ ಕಾಮಗಾರಿಯನ್ನು ಇನ್ನೂ ಆರಂಭಿಸಿಲ್ಲ. ಜಿಲ್ಲಾಧಿಕಾರಿ ಮತ್ತು ಬಂದರು ಅಧಿಕಾರಿಗಳಿಗೆ ಕರೆ ಮಾಡಿದರೂ ಸಮರ್ಪಕ ಸ್ಪಂದನೆ ಸಿಕ್ಕಿಲ್ಲವೆಂದು ಸೋಮೇಶ್ವರ ಪುರಸಭಾ ಸದಸ್ಯ ರವಿಶಂಕರ್ ಸೋಮೇಶ್ವರ ದೂರಿದ್ದಾರೆ.
ಸೋಮೇಶ್ವರ ನ್ಯೂಉಚ್ಚಿಲದ ವಾಸ್ಕೊ ರೆಸಾರ್ಟ್ ಎದುರಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ತೀರದಲ್ಲಿರುವ ಯೋಗೀಶ್ ಎಂಬವರ ಮನೆ ಈಗಲೋ ಆಗಲೋ ಎಂದು ಸಮುದ್ರಕ್ಕೆ ಆಹುತಿಯಾಗುವ ಭೀತಿಯಲ್ಲಿದೆ. ಸೋಮೇಶ್ವರ - ಉಚ್ಚಿಲ ಸಂಪರ್ಕದ ಬೀಚ್ ರಸ್ತೆಯನ್ನೂ ಪ್ರಚಂಡ ಅಲೆಗಳು ನುಂಗಲು ಮುಂದಡಿ ಇಡುತ್ತಿವೆ. ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಅವರು ಶುಕ್ರವಾರದಂದೇ ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿಯನ್ನು ಬಂದರು ಇಲಾಖಾಧಿಕಾರಿಗಳು ಆರಂಭಿಸುವುದಾಗಿ ಹೇಳಿದ್ದರು.


ಶುಕ್ರವಾರ ಸಮುದ್ರ ಕೊರೆತ ತಡೆಗೆ ಕಲ್ಲುಗಳನ್ನ ಹಾಕುವ ತಾತ್ಕಾಲಿಕ ಕಾಮಗಾರಿ ಆರಂಭಿಸುವ ನಿರೀಕ್ಷೆ ಸ್ಥಳೀಯರಲ್ಲಿತ್ತು. ಆದರೆ ಸಂಜೆಯ ವರೆಗೂ ರಕ್ಷಣಾ ಕಾಮಗಾರಿಗಳನ್ನ ಆರಂಭಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗೆಯೆ ಅಧಿಕಾರಿಗಳು ಅಸಡ್ಡೆ ವಹಿಸಿದರೆ ಕೆಲವೇ ದಿನಗಳಲ್ಲಿ ಉಚ್ಚಿಲ- ಸೋಮೇಶ್ವರ ಸಂಪರ್ಕ ರಸ್ತೆಯೂ ಸಮದ್ರ ಪಾಲಾಗುವುದು ನಿಶ್ಚಿತವಾಗಿದೆ.
ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ಕರೆ ಮಾಡಿದ್ದೆ. ಅವರ ಆಪ್ತ ಸಹಾಯಕರು ಕರೆ ಸ್ವೀಕರಿಸಿ ಮಾತನಾಡಿದ್ದು ಕಡಲ್ಕೊರೆತದ ತೀವ್ರತೆಯ ಬಗ್ಗೆ ಹೇಳಿದ್ದೆ. ಶುಕ್ರವಾರ ಮತ್ತೆ ಜಿಲ್ಲಾಧಿಕಾರಿಗಳಿಗೆ ಫೋನ್ ಕರೆ ಮಾಡಿದ್ದು ಕರೆಯನ್ನು ಯಾರೂ ಸ್ವೀಕರಿಸಿಲ್ಲ. ಒಂದೆರಡು ಬಂದರು ಅಧಿಕಾರಿಗಳಿಗೂ ಫೋನ್ ಕರೆ ಮಾಡಿದ್ದು ಅವರಿಂದಲೂ ಸಮಸ್ಯೆಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನ ರಕ್ಷಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ರೀತಿ ಅಧಿಕಾರಿಗಳು ಅಸಡ್ಡೆ ತೋರಿಸಿದರೆ ಶೀಘ್ರವೇ ಮನೆ ಮತ್ತು ರಸ್ತೆ ಸಮುದ್ರ ಪಾಲಾಗಲಿದೆ ಎಂದು ಸೋಮೇಶ್ವರ ಪುರಸಭೆ ಸದಸ್ಯರಾದ ರವಿಶಂಕರ್ ಸೋಮೇಶ್ವರ ಹೇಳಿದ್ದಾರೆ.
Mangalore Someswara beach rough sea at Uchila, residents in great danger and fear. Local authorities, adminstration and port authorise show no concern even after residents calling them for help.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm