ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.
ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm