ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm