ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm