ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.
ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm