ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm