ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm