ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm