ಬ್ರೇಕಿಂಗ್ ನ್ಯೂಸ್
28-07-24 11:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಸಕಲೇಶಪುರ – ಸುಬ್ರಹ್ಮಣ್ಯ ಮಧ್ಯೆ ರೈಲು ಹಳಿಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿರುವುದರಿಂದ ಪಶ್ಚಿಮ ಘಟ್ಟದ ಬೆಟ್ಟಗಳ ಮಧ್ಯೆ ನಿರಂತರ ಕಾರ್ಯಾಚರಣೆ ನಡೆದಿದೆ. ಸ್ಥಳದಲ್ಲಿ 200ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಆದಷ್ಟು ಶೀಘ್ರ ರೈಲು ಸೇವೆಯನ್ನು ಯಥಾಸ್ಥಿತಿಗೊಳಿಸಲು ಶ್ರಮ ಪಡುತ್ತಿದ್ದಾರೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು- ಬೆಂಗಳೂರು ಸಂಪರ್ಕದ ಪ್ರಮುಖ ಮಾರ್ಗವಾಗಿರುವುದರಿಂದ ರೈಲು ಸೇವೆಯನ್ನು ಸರಿಪಡಿಸುವುದಕ್ಕಾಗಿ ಸ್ಥಳದಲ್ಲಿ ಒಟ್ಟು 430 ಸಿಬಂದಿಯನ್ನು ನಿಯೋಜನೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ 200 ಸಿಬಂದಿ, ರಾತ್ರಿ ವೇಳೆ 120 ಸಿಬಂದಿ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ, 110 ಸಿಬಂದಿ ಹೆಚ್ಚುವರಿ ಅಗತ್ಯಕ್ಕಾಗಿ ಕರೆಸಿಕೊಳ್ಳಲಾಗಿದೆ. ಸಿಬಂದಿಗೆ ಕೋಟ್, ಶೂಸ್, ಪೋರ್ಟೆಬಲ್ ಟಾಯ್ಲೆಟ್ ಎಲ್ಲವನ್ನೂ ಮಾಡಲಾಗಿದೆ. ನಾಲ್ಕು ಮಂದಿ ಅಡುಗೆಯವರು ಸ್ಥಳದಲ್ಲೇ ಊಟ, ತಿಂಡಿಯನ್ನು ರೆಡಿ ಮಾಡುತ್ತಿದ್ದಾರೆ. ಇದಕ್ಕಾಗಿ ಕಚ್ಚಾ ಸಾಮಗ್ರಿಗಳನ್ನು ಸುಬ್ರಹ್ಮಣ್ಯದಿಂದ ತರಿಸಲಾಗಿದೆ.






ಇದಲ್ಲದೆ, ವೈದ್ಯರು, ನರ್ಸ್ ಗಳು ಕೂಡ ಸ್ಥಳದಲ್ಲಿದ್ದು, ಕಾರ್ಯಾಚರಣೆ ಸಂದರ್ಭದಲ್ಲಿ ತುರ್ತು ಅಗತ್ಯಕ್ಕೆ ಕರೆಸಲಾಗಿದೆ. ಸಕಲೇಶಪುರದಿಂದ ಬಂದಿರುವ ಎಂಟು ಮಂದಿ ಸದಸ್ಯರ ಮೆಡಿಕಲ್ ಟೀಮ್ ಇದ್ದು, ಎರಡು ಶಿಫ್ಟ್ ನಲ್ಲಿ ರಾತ್ರಿ- ಹಗಲು ಕೆಲಸ ಮಾಡುತ್ತಿದೆ. ಕಾರ್ಯಾಚರಣೆಗೆ ನೆರವಾಗಲು ಎಂಟು ಪೋರ್ಟೆಬಲ್ ಜನರೇಟರ್, 60 ಫ್ಲಡ್ ಲೈಟ್ಸ್, ಎಂಟು ಟಾರ್ಚ್, 1140 ಲೀಟರ್ ಪೆಟ್ರೋಲ್, ಗ್ಯಾಸ್ ಕಟ್ಟರ್ ತರಿಸಲಾಗಿದೆ. ಆಪರು ಹಿಟಾಚಿ, ಐದು ಪ್ರೊಕ್ಲೈನ್ ಮೆಷಿನ್ ತರಿಸಲಾಗಿದೆ. 20 ವ್ಯಾಗನ್ ಗಳಲ್ಲಿ ಶೋರನೂರಿನಿಂದ ಜಲ್ಲಿಕಲ್ಲುಗಳನ್ನು ತರಿಸಲಾಗಿದೆ. 40 ಕೇಜಿಯ ಒಂದು ಲಕ್ಷ ಮರಳು ಚೀಲಗಳನ್ನು ತರಿಸಿಕೊಂಡಿದ್ದು, ಕಾರ್ಯಾಚರಣೆಗೆ ಬಳಸಲಾಗುತ್ತಿದೆ.
ರೈಲ್ವೇ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು, ತಜ್ಞರು ಸ್ಥಳಕ್ಕೆ ಬಂದು ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಮೈಸೂರು ಡಿವಿಶನ್ ಡಿಆರ್ ಎಂ ಶಿಲ್ಪಿ ಅಗರ್ವಾಲ್, ದಕ್ಷಿಣ ರೈಲ್ವೇ ಜಿಎಂ ಅರವಿಂದ ಶ್ರೀವಾಸ್ತವ ಮತ್ತಿತರ ಅಧಿಕಾರಿಗಳು ಬಂದು ಠಿಕಾಣಿ ಹೂಡಿದ್ದಾರೆ. ಸದ್ಯಕ್ಕೆ ಹಳಿಯ ಸಮಸ್ಯೆ ಸರಿ ಆಗೋವರೆಗೂ ಈ ಭಾಗದಲ್ಲಿ ರೈಲು ಸೇವೆ ಪುನರ್ ಸ್ಥಾಪನೆ ಸಾಧ್ಯವಿಲ್ಲ ಎಂದು ರೈಲ್ವೇ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The South Western Railway (SWR) had initially canceled all train services on the Bengaluru-Mangaluru sector until Monday. However, the cancellation has now been extended indefinitely due to extensive earth embankment work required to restore tracks affected by landslips in the Sakleshpur-Subrahmanya Road Ghat section.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm