ಬ್ರೇಕಿಂಗ್ ನ್ಯೂಸ್
29-07-24 01:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಕೇರಳದಲ್ಲಿ ನಿಫಾ ವೈರಸ್ ಸೋಂಕಿಗೆ ತುತ್ತಾದ ರೋಗಿಗೆ ಆರೈಕೆ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕು ತಗಲಿ ಕೋಮಾ ಸ್ಥಿತಿಗೆ ತಲುಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್, ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲಿರುವಾಗಲೇ 2023 ಸೆಪ್ಟೆಂಬರ್ ತಿಂಗಳಲ್ಲಿ ಇವರು ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದರು ಎನ್ನಲಾಗಿದೆ. ಆಬಳಿಕ ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿತ್ತು.
ಡಿಸೆಂಬರ್ ತಿಂಗಳಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ನಿಫಾ ಸೋಂಕಿನಿಂದಾಗಿಯೇ ಮಿದುಳಿನ ಸ್ಟ್ರೋಕ್ ಆಗಿರುವುದು ತಿಳಿದುಬಂದಿದ್ದು ಕೆಲವು ದಿನಗಳಲ್ಲೇ ಕೋಮಾ ಸ್ಥಿತಿಗೆ ಜಾರಿದ್ದರು. ಆನಂತರ ಅದೇ ಆಸ್ಪತ್ರೆಯ ಆಡಳಿತ ಮಂಡಳಿ ವತಿಯಿಂದಲೇ ಚಿಕಿತ್ಸೆ ನೀಡಿದ್ದರೂ, ಯಾವುದೇ ಫಲ ಕಂಡಿಲ್ಲ. ಆಡಳಿತ ಮಂಡಳಿ ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.
ಹೀಗಾಗಿ ಉನ್ನತ ಮಟ್ಟದ ಆಸ್ಪತ್ರೆಗೆ ದಾಖಲಿಸಿ ಮಗನಿಗೆ ಚಿಕಿತ್ಸೆ ನೀಡುವಂತೆ ಕುಟುಂಬಸ್ಥರು ಕೇರಳ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಒಂದು ವರ್ಷದ ಹಿಂದೆ ಮಾರಣಾಂತಿಕ ಎನ್ನಲಾದ ನಿಫಾ ಸೋಂಕು ಕೇರಳದಲ್ಲಿ ಒಂದಿಬ್ಬರಿಗೆ ಕಂಡುಬಂದಿತ್ತು. ಆನಂತರ ಸೋಂಕಿಗೆ ಒಳಗಾದವರು ಚಿಕಿತ್ಸೆ ಪಡೆದು ಚೇತರಿಸಿದ್ದರು.
A man from Dakshina Kannada district, who was taking care of a patient infected with Nipah virus in Kerala, has been infected with Nipah virus and has gone into a coma.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm