ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm