ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm