ಬ್ರೇಕಿಂಗ್ ನ್ಯೂಸ್
29-07-24 10:08 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಮಣ್ಣಗುಡ್ಡ, ಸೆಂಟ್ರಲ್ ಮಾರುಕಟ್ಟೆ, ಏರ್ಪೋರ್ಟ್ ರಸ್ತೆಯಲ್ಲಿ ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಗೂಡಂಗಡಿಗಳನ್ನು ತೆರವುಗೊಳಿಸಲು ಮಹಾನಗರ ಪಾಲಿಕೆಯಿಂದ ಬುಲ್ಡೋಜರ್ ನುಗ್ಗಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಕ್ರಿಮಿನಲ್ ಹಿನ್ನೆಲೆಯ, ಭೂ ಅತಿಕ್ರಮಣದಾರರ ವಿರುದ್ಧ ಜೆಸಿಬಿ ನುಗ್ಗಿಸಿದ ರೀತಿ ಮಂಗಳೂರಿನಲ್ಲಿ ಬಿಜೆಪಿ ಆಡಳಿತ ಬಡ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿಯಲ್ಲಿ ಸವಾರಿ ಮಾಡಿದೆ.
ಸೋಮವಾರ ಬೆಳಗ್ಗೆ ಗಾಂಧಿನಗರದ ಮಂಗಳಾ ಸ್ಟೇಡಿಯಂ ಎದುರಲ್ಲಿರುವ ಗೂಡಂಗಡಿಗಳನ್ನು ತೆರವು ಮಾಡಲು ಯತ್ನಿಸಿದ್ದಾರೆ. ಈ ವೇಳೆ, ವ್ಯಾಪಾರಿಗಳು ಅಡ್ಡ ಬಂದಿದ್ದು, ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿಯಿಂದ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಜೋರು ಗಲಾಟೆ ಮಾಡಿದ್ದು ಪೊಲೀಸರು ತಡೆದ ವ್ಯಾಪಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿಕೆಯ ಅಧಿಕಾರಿಗಳು ಜೆಸಿಬಿಯಿಂದ ಗೂಡಂಗಡಿಗಳನ್ನು ಒಡೆದು ಹಾಕಿಸಿ, ಟಿಪ್ಪರ್ ಲಾರಿಗಳಿಗೆ ತುಂಬಿಸಿದ್ದಾರೆ.




ಆನಂತರ, ಸೆಂಟ್ರಲ್ ಮಾರುಕಟ್ಟೆ ಆವರಣದಲ್ಲಿಯೂ ತಳ್ಳುಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವರನ್ನು ಎಬ್ಬಿಸಿ, ಗಾಡಿಗಳನ್ನು ಪುಡಿಗಟ್ಟಿದ್ದಾರೆ. ಅದೇ ರೀತಿಯಲ್ಲಿ ಏರ್ಪೋರ್ ರಸ್ತೆಯ ಯೆಯ್ಯಾಡಿ ಪರಿಸರದಲ್ಲಿಯೂ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ರಸ್ತೆ ಬದಿ ಗೂಡಂಗಡಿ ಇಟ್ಟು ಆಮ್ಲೆಟ್, ಚಹಾ ತಿಂಡಿಗಳನ್ನು ಮಾರುತ್ತಿದ್ದ ಬಡ ವ್ಯಾಪಾರಿಗಳ ಬದುಕಿನ ಮೇಲೆ ಜೆಸಿಬಿ ಸವಾರಿ ಮಾಡಿದೆ. ಕೆಲವೊಂದು ಖಾಲಿ ಅಂಗಡಿಗಳನ್ನೂ ಪುಡಿ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಜಾಲತಾಣದಲ್ಲಿ ಬಿಜೆಪಿ ಆಡಳಿತದ ಜೆಸಿಬಿ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.




ಈ ಬಗ್ಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಮೊನ್ನೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವರು ಬೀದಿ ವ್ಯಾಪಾರಿಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ದೂರು ಹೇಳಿಕೊಂಡಿದ್ದರು. ಈ ಬಗ್ಗೆ ಸೋಮವಾರದಿಂದ ಕಾರ್ಯಾಚರಣೆ ಮಾಡಿಸುತ್ತೇನೆ ಎಂದು ಹೇಳಿದ್ದೆ. ಆನಂತರ, ಮಂಗಳಾ ಸ್ಟೇಡಿಯಂ ಬಳಿಯೂ ಕ್ರೀಡಾಪಟುಗಳು ಬರುವ ದಾರಿಯಲ್ಲೇ ಗೂಡಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಆಕ್ಷೇಪಿಸಿ ದೂರುಗಳು ಬಂದಿದ್ದವು. ಇವತ್ತು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಮಣ್ಣಗುಡ್ಡದಲ್ಲಿ ಅಡ್ಡಿ ಪಡಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆಗೂ ಮುನ್ನ ಪಾಲಿಕೆಯಿಂದ ನೋಟೀಸ್ ಅಥವಾ ಸೂಚನೆ ಕೊಡಬೇಕಿತ್ತು. ಯಾವುದೇ ಸೂಚನೆ ಕೊಡದೆಯೇ ನೇರವಾಗಿ ಕಾರ್ಯಾಚರಣೆ ನಡೆಸಿದ್ದು, ಬಡವರ ಅನ್ನದ ಬಟ್ಟಲಿಗೆ ಕೊಳ್ಳಿ ಇಟ್ಟಿದ್ದಾರೆ ಎಂದು ವ್ಯಾಪಾರಿಗಳು ನೋವು ವ್ಯಕ್ತಪಡಿಸಿದ್ದಾರೆ.
Illegal petteytshops in Mangalore demolished by MCC, shop vendors taken intonl custody. Fight erupted between shop owners and mcc officals over destroying of petty shops using JCB.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm