ಬ್ರೇಕಿಂಗ್ ನ್ಯೂಸ್
31-07-24 02:40 pm Mangalore Correspondent ಕರಾವಳಿ
ಉಡುಪಿ, ಜುಲೈ 31: ಕರಾವಳಿಯ ಯಕ್ಷಗಾನ ರಂಗದಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸೇವೆ ನೀಡಿದ್ದ ಗುರುಪ್ರಸಾದ್ ನೀರ್ಜೆಡ್ಡು 26 ವರ್ಷಕ್ಕೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 27ರಂದು ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ನಿನ್ನೆ (ಜುಲೈ 30) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು, ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದರು.
ಸ್ತ್ರೀವೇಷಧಾರಿಯಾಗಿ ತಮ್ಮ ಕುಣಿತ, ಮಾತು ಹಾಗೂ ಕಲೆಯಿಂದ ಅಪಾರ ಯಕ್ಷ ಅಭಿಮಾನಿಗಳನ್ನು ಹೊಂದಿದ್ದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣಾಗಿರುವು ಮಾತ್ರ ಶಾಕಿಂಗ್ ವಿಚಾರವಾಗಿದೆ. 12 ವರ್ಷ ಸ್ತ್ರೀ ವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಅವರು ತಾಯಿ, ತಮ್ಮ, ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನದ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Udupi Yakshagana artiste Guruprasad Neerjeddu dies by suicide. The deceased, Guruprasad Neerjeddu (26), had donned the female roles in Mandarthi, Madamakki, Amriteshwari, Saligrama and Marankatte Melas (troupes) for about 12 years.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm