ಬ್ರೇಕಿಂಗ್ ನ್ಯೂಸ್
31-07-24 08:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿ ದಿಢೀರ್ ಕುಸಿದು ಬಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ರೀತಿಯಲ್ಲಿ ಅತಿವೇಗದಲ್ಲಿ ಚಲಾಯಿಸಿ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆ ನಗರದಲ್ಲಿ ನಡೆದಿದ್ದು, ಬಸ್ ಸಿಬಂದಿಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಕುಂಜತ್ತ್ ಬೈಲ್- ಮಂಗಳಾದೇವಿ ನಡುವೆ ಸಂಚರಿಸುವ 13- ಎಫ್ ನಂಬರಿನ ಖಾಸಗಿ ಬಸ್ಸಿನಲ್ಲಿ ಘಟನೆ ನಡೆದಿದೆ. ಸಂಜೆ ವೇಳೆಗೆ ಕುಳೂರಿನಿಂದ ಜ್ಯೋತಿಯತ್ತ ಬರುತ್ತಿದ್ದ ಯುವತಿಗೆ ಲೇಡಿಹಿಲ್ ತಲುಪಿದಾಗ ಅಸ್ವಸ್ಥತೆ ಉಂಟಾಗಿತ್ತು. ಪಿವಿಎಸ್ ತಲುಪಿದಾಗ ಕುಸಿದು ಬಿದ್ದಿದ್ದು, ಬಂಟ್ಸ್ ಹಾಸ್ಟೆಲ್, ಜ್ಯೋತಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಇದ್ದರೂ ಅಲರ್ಟ್ ಸೈರನ್ ಮೊಳಗಿಸುತ್ತಾ ಬಸ್ಸನ್ನು ನೇರವಾಗಿ ಕಂಕನಾಡಿಯತ್ತ ನುಗ್ಗಿಸಿದ್ದಾರೆ.





ಎಲ್ಲಿಯೂ ಪಿಕಪ್ ಮಾಡದೆ ಇಳಿಯುವುದಕ್ಕೆ ಮಾತ್ರ ಅವಕಾಶ ಕೊಟ್ಟು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯತ್ತ ಒಯ್ದು ಅಲ್ಲಿ ಯುವತಿಯನ್ನು ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ. ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕ ಮಹೇಶ್ ಪೂಜಾರಿ ಅವರ ಕೆಲಸಕ್ಕೆ ಸಾರ್ವಜನಿಕರು ಶಹಭಾಷ್ ಹೇಳಿದ್ದಾರೆ. ತುರ್ತಾಗಿ ಯುವತಿಯನ್ನು ಆಸ್ಪತ್ರೆಗೆ ಒಯ್ದಿದ್ದರಿಂದ ಆಕೆ ಬದುಕುಳಿದಿದ್ದಾಳೆ ಎಂದು ತಿಳಿದುಬಂದಿದೆ.
Mangalore Krishna prasad city bus turns into ambulance, rushes medical emergency student to hospital. The bus on Route 13F was plying from Kunjathbail to Mangaladevi temple. Gajendra Kundar was driving while Mahesh Poojary was the conductor. Suresh, another driver who had to take over from Kundar, was also in the bus. The video of this has gone viral on social media
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm