ಬ್ರೇಕಿಂಗ್ ನ್ಯೂಸ್
31-07-24 10:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 1ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಹನಿ ಕಟ್ಟದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಟ್ಟ ಸಾಲುಗಳ ಮಧ್ಯದ ಜನರಲ್ಲಿ ವಯನಾಡ್ ಕುಸಿತದ ಬಳಿಕ ಭಯವೇ ಶುರುವಾಗಿಬಿಟ್ಟಿದೆ. ಜಿಲ್ಲಾಡಳಿತವೂ ಶಾಲೆ, ಕಾಲೇಜಿಗೆ ಹೋಗುವ ಮಕ್ಕಳು ಅಪಾಯಕ್ಕೆ ಸಿಲುಕದಿರಲಿ ಎಂದು ಎರಡನೇ ದಿನವೂ ರಜೆ ಸಾರಿಬಿಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಕಾಪು, ಉಡುಪಿ, ಕಾರ್ಕಳ, ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಮಾತ್ರ ರಜೆ ನೀಡಲಾಗಿತ್ತು. ಆಗಸ್ಟ್ 1ರಂದು ಇಡೀ ಜಿಲ್ಲೆಯಾದ್ಯಂತ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಜುಲೈ 31ರಂದು ರೆಡ್ ಅಲರ್ಟ್ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಮಂಗಳವಾರದಿಂದ ನಿರಂತರ ಎನ್ನುವಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರಾ, ಫಲ್ಗುಣಿ, ಸ್ವರ್ಣಾ ನದಿಗಳು ಉಕ್ಕಿ ಹರಿಯತೊಡಗಿವೆ. ಇದಲ್ಲದೆ, ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಹೆಚ್ಚಿರುವುದರಿಂದ ಪಶ್ಚಿಮದತ್ತ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.
ಬುಧವಾರ ಬೆಳಗ್ಗೆ 11 ಗಂಟೆ ವರೆಗೆ ಮಳೆ ಇರಲಿಲ್ಲ. ಮಳೆ ಸ್ವಲ್ಪ ಬಿಡುವು ನೀಡಿದೆ, ಜಿಲ್ಲಾಧಿಕಾರಿ ರಜೆ ಕೊಟ್ಟದ್ದು ವೇಸ್ಟ್ ಆಯಿತು ಅನ್ನುವ ಮಾತುಗಳು ಜನರ ಬಾಯಲ್ಲಿ ಕೇಳಿಬಂದಿದ್ದವು. ಆದರೆ ಆನಂತರ ಶುರುವಾದ ಮಳೆ ಮತ್ತೆ ನಿಂತಿಲ್ಲ. ಮಧ್ಯಾಹ್ನ ನಂತರವಂತೂ ನಿರಂತರ ಮಳೆಯಾಗಿದೆ. ಮಳೆ, ಶೀತ ಗಾಳಿಗೆ ಜನರಲ್ಲಿ ಥಂಟಿ ಹಿಡಿದಂತೆ ಚಳಿ ಆವರಿಸಿಕೊಂಡಿದೆ. ಹಠ ಕಟ್ಟಿದ ರೀತಿ ಮಳೆ ಸುರಿಯುತ್ತಿದ್ದು, ಬೆಟ್ಟ ಸಾಲುಗಳ ಮಧ್ಯದ ಜನ ವಯನಾಡ್ ರೀತಿ ಇಲ್ಲಿ ಆಗದಿರಲಿ ಎನ್ನುವ ಬೇಡಿಕೊಳ್ಳುತ್ತಿದ್ದಾರೆ.
Heavy rain in Mangalore, Holiday for schools in Mangalore and Udupi districts on August 1st. The Dakshina Kannada and Udupi district administrations on Wednesday declared a holiday for educational institutions up to pre-university colleges on Thursday, in view of the anticipated very heavy rains as the IMD has issued a red alert for these areas.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm