ಬ್ರೇಕಿಂಗ್ ನ್ಯೂಸ್
31-07-24 10:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 1ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಹನಿ ಕಟ್ಟದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಟ್ಟ ಸಾಲುಗಳ ಮಧ್ಯದ ಜನರಲ್ಲಿ ವಯನಾಡ್ ಕುಸಿತದ ಬಳಿಕ ಭಯವೇ ಶುರುವಾಗಿಬಿಟ್ಟಿದೆ. ಜಿಲ್ಲಾಡಳಿತವೂ ಶಾಲೆ, ಕಾಲೇಜಿಗೆ ಹೋಗುವ ಮಕ್ಕಳು ಅಪಾಯಕ್ಕೆ ಸಿಲುಕದಿರಲಿ ಎಂದು ಎರಡನೇ ದಿನವೂ ರಜೆ ಸಾರಿಬಿಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಕಾಪು, ಉಡುಪಿ, ಕಾರ್ಕಳ, ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಮಾತ್ರ ರಜೆ ನೀಡಲಾಗಿತ್ತು. ಆಗಸ್ಟ್ 1ರಂದು ಇಡೀ ಜಿಲ್ಲೆಯಾದ್ಯಂತ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಜುಲೈ 31ರಂದು ರೆಡ್ ಅಲರ್ಟ್ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಮಂಗಳವಾರದಿಂದ ನಿರಂತರ ಎನ್ನುವಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರಾ, ಫಲ್ಗುಣಿ, ಸ್ವರ್ಣಾ ನದಿಗಳು ಉಕ್ಕಿ ಹರಿಯತೊಡಗಿವೆ. ಇದಲ್ಲದೆ, ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಹೆಚ್ಚಿರುವುದರಿಂದ ಪಶ್ಚಿಮದತ್ತ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.
ಬುಧವಾರ ಬೆಳಗ್ಗೆ 11 ಗಂಟೆ ವರೆಗೆ ಮಳೆ ಇರಲಿಲ್ಲ. ಮಳೆ ಸ್ವಲ್ಪ ಬಿಡುವು ನೀಡಿದೆ, ಜಿಲ್ಲಾಧಿಕಾರಿ ರಜೆ ಕೊಟ್ಟದ್ದು ವೇಸ್ಟ್ ಆಯಿತು ಅನ್ನುವ ಮಾತುಗಳು ಜನರ ಬಾಯಲ್ಲಿ ಕೇಳಿಬಂದಿದ್ದವು. ಆದರೆ ಆನಂತರ ಶುರುವಾದ ಮಳೆ ಮತ್ತೆ ನಿಂತಿಲ್ಲ. ಮಧ್ಯಾಹ್ನ ನಂತರವಂತೂ ನಿರಂತರ ಮಳೆಯಾಗಿದೆ. ಮಳೆ, ಶೀತ ಗಾಳಿಗೆ ಜನರಲ್ಲಿ ಥಂಟಿ ಹಿಡಿದಂತೆ ಚಳಿ ಆವರಿಸಿಕೊಂಡಿದೆ. ಹಠ ಕಟ್ಟಿದ ರೀತಿ ಮಳೆ ಸುರಿಯುತ್ತಿದ್ದು, ಬೆಟ್ಟ ಸಾಲುಗಳ ಮಧ್ಯದ ಜನ ವಯನಾಡ್ ರೀತಿ ಇಲ್ಲಿ ಆಗದಿರಲಿ ಎನ್ನುವ ಬೇಡಿಕೊಳ್ಳುತ್ತಿದ್ದಾರೆ.
Heavy rain in Mangalore, Holiday for schools in Mangalore and Udupi districts on August 1st. The Dakshina Kannada and Udupi district administrations on Wednesday declared a holiday for educational institutions up to pre-university colleges on Thursday, in view of the anticipated very heavy rains as the IMD has issued a red alert for these areas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm