ಬ್ರೇಕಿಂಗ್ ನ್ಯೂಸ್
01-08-24 02:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಫಲ್ಗುಣಿ ನದಿಯ ಹರಿಯುವ ಉದ್ದಕ್ಕೂ ನಿನ್ನೆ ರಾತ್ರಿ ದಿಢೀರ್ ನೆರೆ ಬಂದಿದೆ. ವೇಣೂರು, ಹೊಸಂಗಡಿ, ಪೊಳಲಿ ಸಮೀಪದ ಅಮ್ಮುಂಜೆ, ಉಳಾಯಿಬೆಟ್ಟು ಆಸುಪಾಸಿನಲ್ಲಿ ರಾತ್ರೋರಾತ್ರಿ ನೀರು ಉಕ್ಕಿ ಬಂದಿದ್ದು, ಪರಿಸರದ ಹಲವಾರು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಜನರು ಮನೆ ಬಿಟ್ಟು ಹೊರಬಂದು ಪರದಾಟ ಅನುಭವಿಸಿದ್ದಾರೆ.
ಇತ್ತ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಇಳಿಕೆಯಾದರೂ, ಫಲ್ಗುಣಿ ನದಿಯಲ್ಲಿ ಮಾತ್ರ ನೆರೆ ಬಂದಿರುವುದು ಹೇಗೆ ಎಂಬ ಪ್ರಶ್ನೆ ಬಂದಿದೆ. ಗುರುಪುರದಲ್ಲಿ ಹೊಸ ಹೆದ್ದಾರಿಗೆ ಅವೈಜ್ಞಾನಿಕ ರೀತಿ ಮತ್ತು ತರಾತುರಿಯಲ್ಲಿ ಕಟ್ಟಲಾಗುತ್ತಿರುವ ಅಣೆಕಟ್ಟು ಹಾಗೂ ಕುಳೂರಿನಲ್ಲಿ ಎರಡು ವರ್ಷಗಳಿಂದಲೂ ಅಣೆಕಟ್ಟು ಸಲುವಾಗಿ ನದಿಗೆ ಮಣ್ಣು ತುಂಬಿದ್ದರಿಂದ ಈ ರೀತಿಯ ನೆರೆ ಬಂದಿದೆ ಎನ್ನಲಾಗುತ್ತಿದೆ.











ಹೊಸಂಗಡಿ, ವೇಣೂರಿನಲ್ಲಿ ಈ ರೀತಿ ನೆರೆ ಬಂದಿದ್ದು ಭಾರೀ ಕಡಿಮೆ. ಅಲ್ಲದೆ, ಪೊಳಲಿ ಆಸುಪಾಸಿನಲ್ಲಿಯೂ ನೆರೆ ಬಂದದ್ದಿಲ್ಲ. ಉಳಾಯಿಬೆಟ್ಟು ಪರಿಸರದಲ್ಲಿ ಹೆಚ್ಚು ಮಳೆಯಾದರೆ ಈ ಹಿಂದೆಯೂ ನೀರು ಉಕ್ಕಿ ಕೃಷಿಗೆ ನುಗ್ಗಿದ್ದಿದೆ. ಆದರೆ, ಫಲ್ಗುಣಿ ನದಿ ಹರಿಯುವ ಎಲ್ಲ ಕಡೆಯೂ ಈ ಬಾರಿ ನೆರೆ ಬಂದಿದೆ. ಅದ್ಯಪಾಡಿ ಬಳಿಯ ಮುಗೇರಕುದ್ರು ಎನ್ನುವ ಪ್ರದೇಶವಂತೂ ಒಂದು ತಿಂಗಳಿನಿಂದ ಮುಳುಗಡೆಯಾಗಿದೆ. ಅದಕ್ಕೆ ಅಲ್ಲಿನ ಅವೈಜ್ಞಾನಿಕ ಅಣೆಕಟ್ಟು ಕಾರಣವಾದರೆ, ಬೇರೆಲ್ಲ ಕಡೆ ದಿಢೀರ್ ನೆರೆ ನೀರು ಉಕ್ಕುವುದಕ್ಕೆ ಮಳೆ ಎಷ್ಟು ಕಾರಣವೋ, ಸೇತುವೆಯ ಕಾರಣಕ್ಕೆ ನದಿಗೆ ಮಣ್ಣು ತುಂಬಿಸಿರುವುದೂ ಅಷ್ಟೇ ಕಾರಣ.
ಪೊಳಲಿ, ಉಳಾಯಿಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಮನೆಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ವೇಣೂರು, ಹೊಸಂಗಡಿ ಪ್ರದೇಶದಲ್ಲಿ ಸ್ಥಳೀಯ ನಿವಾಸಿಗಳು ಮಹಿಳೆಯರು, ಮಕ್ಕಳು ನಿದ್ದೆ ಬಿಟ್ಟು ರಸ್ತೆಗೆ ಬಂದು ನಿಂತುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇದೇ ಏರಿಯಾದಲ್ಲಿ ರಸ್ತೆಗೆ ನೀರು ನುಗ್ಗಿದ್ದರಿಂದ ಬಸ್ ತೆರಳಲು ಸಾಧ್ಯವಾಗದೆ, ಸ್ಥಳೀಯರು ಅದರಲ್ಲಿದ್ದ ಜನರನ್ನು ಇಳಿಸಿ ಇನ್ನೊಂದು ಕಡೆಗೆ ದಾಟಿಸಿದ್ದಾರೆ. ಗುರವಾರ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಎಂದಿನ ರೀತಿಯಲ್ಲೇ ಪರಿಹಾರದ ಮಾತುಗಳನ್ನಾಡಿ ಬಂದಿದ್ದಾರೆ.
Mangalore heavy rain, palguni river water overflows, houses and tempele flooded with water. The water level of the Gurpur Phalguni river rose to dangerous levels due to the incessant rains lashing the city since Wednesday. Water gushed into the house of Arbee Didpe in Sanjeev early Thursday morning. Fire service personnel from Pandeshwar rushed to the spot.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm