ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.


ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am