ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.


ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am