ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.
ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.
ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm