ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.


ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm