ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.


ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am