ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm