ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm