ಬ್ರೇಕಿಂಗ್ ನ್ಯೂಸ್
06-08-24 07:25 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.6: ದೇಶದ ಗಮನಸೆಳೆದು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮಂಗಳೂರಿನ ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣದಲ್ಲಿ ಹಿಂದು ಜಾಗರಣ ವೇದಿಕೆಯ ಸುಭಾಸ್ ಪಡೀಲ್ ಸೇರಿದಂತೆ ಎಲ್ಲ 39 ಆರೋಪಿಗಳನ್ನು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ವಿ ಕಾಂತರಾಜು 12 ವರ್ಷಗಳ ಬಳಿಕ ಮಹತ್ವದ ತೀರ್ಪು ನೀಡಿದ್ದಾರೆ.
2012ರ ಜುಲೈ 28ರಂದು ರಾತ್ರಿ ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ, ಯುವತಿಯರ ಮೇಲೆ ತಂಡ ದಾಳಿಗೈದು ಹಲ್ಲೆ ನಡೆಸಿತ್ತು. ಹೋಮ್ ಸ್ಟೇಯಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ದಾಳಿ ನಡೆಸಲಾಗಿತ್ತು. ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಪತ್ರಕರ್ತರು ಸೇರಿ 40ಕ್ಕೂ ಹೆಚ್ಚು ಮಂದಿ ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು.


ಘಟನೆ ಬಗ್ಗೆ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 44 ಆರೋಪಿಗಳ ಪೈಕಿ ಮೂವರು ವಿಚಾರಣೆ ಸಂದರ್ಭದಲ್ಲೇ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಸೇರ್ಪಡೆಗೊಂಡಿದ್ದ ಪತ್ರಕರ್ತ ನವೀನ್ ಸೂರಿಂಜೆಯನ್ನು ನ್ಯಾಯಾಲಯ ವಿಚಾರಣೆ ನಡುವಲ್ಲೇ ಪ್ರಕರಣದಿಂದ ಕೈಬಿಟ್ಟಿತ್ತು. ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವೀನ್ ಸೂರಿಂಜೆ ಮೇಲಿನ ಕೇಸನ್ನು ವಾಪಸ್ ಪಡೆಯಲಾಗಿತ್ತು.
ಐದು ಹುಡುಗಿಯರು ಸೇರಿದಂತೆ 12 ಮಂದಿಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು. ಬಳಿಕ ಮಹಿಳಾ ಆಯೋಗ ತನಿಖೆ ನಡೆಸಿ ಪೊಲೀಸ್ ವೈಫಲ್ಯದ ಬಗ್ಗೆ ಗೃಹ ಸಚಿವರಿಗೆ ವರದಿ ನೀಡಿತ್ತು. 12 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೂಕ್ತ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇತರೇ 39 ಆರೋಪಿಗಳನ್ನ ದೋಷಮುಕ್ತಗೊಳಿಸಿ ಮಂಗಳವಾರ ಜಿಲ್ಲಾ ಕೋರ್ಟ್ ತೀರ್ಪು ನೀಡಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿತ್ತು.
In a significant judgment, the Sixth Additional District and Sessions Court of Mangaluru has acquitted all the accused in the homestay illegal raid case of 2012.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm