ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.
ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm