ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm