ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm