ಬ್ರೇಕಿಂಗ್ ನ್ಯೂಸ್
07-08-20 03:36 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 7: ಕಾರು ಚಾಲಕನ ಅಚಾತುರ್ಯ, ನಿರ್ಲಕ್ಷ್ಯ ಎಂಥಾ ದುರ್ಘಟನೆಗೆ ಕಾರಣವಾಗುತ್ತೆ ಈ ಘಟನೆ ಸಾಕ್ಷಿ. ಸ್ಕೂಟರ್ ಡಿಕ್ಕಿಯಾಗಿ ಅದರಲ್ಲಿದ್ದ ಸವಾರೆ ಯುವತಿ ಕಾರಿನ ಮೇಲೆ ಬಾನೆಟಿಗೆ ಬಿದ್ದರೂ ಚಾಲಕ ನಿಲ್ಲಿಸದೆ ಮುಂದಕ್ಕೊಯ್ದಿದ್ದರಿಂದ ಯುವತಿಯ ಮೇಲಿಂದಲೇ ಕಾರು ಹರಿದ ಘಟನೆ ಮಂಗಳೂರಿನ ಕದ್ರಿ ಕಂಬ್ಳದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಘಟನೆ ನಡೆದಿದ್ದು ಕಾರಿನಡಿಗೆ ಬಿದ್ದ ಯುವತಿಯನ್ನು ವಾಣಿಶ್ರೀ (22) ಎಂದು ಗುರುತಿಸಲಾಗಿದೆ. ಬಿಜೈ ಕಡೆಯಿಂದ ಬರುತ್ತಿದ್ದ ಸ್ಕೂಟರಿಗೆ ಕದ್ರಿ ಕಡೆಯಿಂದ ಆಗಮಿಸುತ್ತಿದ್ದ ಕಾರು ಕದ್ರಿ ಕಂಬಳ ಸರ್ಕಲ್ ಬಳಿ ಡಿಕ್ಕಿಯಾಗಿದೆ. ಕಾರನ್ನು ಚಲಾಯಿಸುತ್ತಿದ್ದ ವೃದ್ಧ ವ್ಯಕ್ತಿ ಕಾರನ್ನು ನಿಲ್ಲಿಸಲಾಗದೆ ತಡಬಡಾಯಿಸಿದ್ದಾನೆ. ಕಾರಿನ ಮುಂಭಾಗದ ಬಾನೆಟ್ಟಿಗೆ ಬಿದ್ದ ಯುವತಿ ಬಳಿಕ ಉರುಳಿಕೊಂಡು ಮುಂದೆ ರಸ್ತೆಗೆ ಬಿದ್ದಿದ್ದಾಳೆ. ಆದರೆ, ಕಾರು ನೇರವಾಗಿ ಮುಂದಕ್ಕೆ ಬಂದಿದ್ದು ನೆಲಕ್ಕೆ ಬಿದ್ದ ಯುವತಿಯನ್ನು ತಳ್ಳಿಕೊಂಡೇ ಬಂದಿದೆ. ಯುವತಿಯ ದೇಹ ಕಾರಿನ ಮುಂಭಾಗದ ಎರಡು ಚಕ್ರದ ಮಧ್ಯೆ ಸಿಕ್ಕಿದ್ದು ಕೂಡಲೇ ಅಲ್ಲಿದ್ದ ಜನ ಕಾರಿಗೆ ಬಡಿದು ನಿಲ್ಲಿಸಿದ್ದಾರೆ. 2- 3 ಮೀಟರ್ ಉದ್ದಕ್ಕೆ ಎಳೆದೊಯ್ದ ಕಾರು ಚಾಲಕ ಬಳಿಕ ಯುವಕರ ಬೊಬ್ಬೆ ಕೇಳಿ ನಿಲ್ಲಿಸಿದ್ದಾನೆ. ಈ ಘಟನೆಯ ಪೂರ್ತಿ ದೃಶ್ಯ ಅಲ್ಲಿನ ಕಟ್ಟಡವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಅವಾಂತರವನ್ನು ಹಿಡಿದಿಟ್ಟಿದೆ.
ಕಾರಿನ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದ ಯುವತಿಯನ್ನು ಬಳಿಕ ಸ್ಥಳೀಯರು ಮತ್ತು ಒಬ್ಬ ಪೊಲೀಸ್ ಸಿಬಂದಿ ಸೇರಿ ಕಾರನ್ನು ಹಿಡಿದು ಎತ್ತುವ ಮೂಲಕ ಹೊರಕ್ಕೆಳೆದಿದ್ದಾರೆ.
Live Video:
ಇಡೀ ಘಟನೆ ಕಾರು ಚಾಲಕನ ಅಚಾತುರ್ಯವನ್ನು ಹಿಡಿದಿಟ್ಟಿದೆ. ಮುಂಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂದು ಕಾಣದೆ ಕಾರು ಚಲಾಯಿಸುವ ವೃದ್ಧ ಚಾಲಕರಿಂದಾಗುವ ಅನಾಹುತಕ್ಕೆ ಕನ್ನಡಿ ಹಿಡಿದಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm