ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm